ಖರ್ಗೆ ಜಿ ಅವರ ಅಭಿನಂದನಾ ಸಮಾರಂಭಕ್ಕೆ ಆಗಮಿಸಲು ಪಕ್ಷದ ಕಾರ್ಯಕರ್ತರಿಗೆ ಕರೆ.
ಜೇವರ್ಗಿ: ತಾಲ್ಲೂಕಿನ ಶಾಸಕರ ಕಚೇರಿಯಲ್ಲಿ ಮಾಜಿ ಸಚಿವರು, ರಾಜ್ಯಸಭಾ ವಿರೋಧ ಪಕ್ಷದ ನಾಯಕರು ಹಾಗೂ ಕಾಂಗ್ರೆಸ್ ಪಕ್ಷದ ವರಿಷ್ಠ ನಾಯಕರಾದ ಸನ್ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆಜೀ ಅವರು ದಿನಾಂಕ 02/10/2021 ರಂದು ಕಲಬುರ್ಗಿ ನಗರಕ್ಕೆ ಆಗಮಿಸುತ್ತಿರುವ ಪ್ರಯುಕ್ತ ಜೇವರ್ಗಿ ತಾಲೂಕಿನ ವಿಧಾನಸೌಧದಲ್ಲಿ ಹಮ್ಮಿಕೊಂಡ ಸಭೆಯಲ್ಲಿ ಜೇವರ್ಗಿ ಶಾಸಕರು ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ.ಅಜಯ್ ಸಿಂಗ್ ರವರು ಮಾತನಾಡಿದರು.
ಜೇವರ್ಗಿ ಇಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮಲ್ಲಿಕಾರ್ಜುನ ಖರ್ಗೆ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಅಭಿನಂದನೆಗಳು ಸಲ್ಲಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಚಂದ್ರಶೇಖರ್ ಹರನಾಳ ಕಾಂಗ್ರೆಸ್ ಹಿರಿಯ ಮುಖಂಡರು, ರಾಜಶೇಖರ್ ಸಿರಿ ಯುವ ಮುಖಂಡರು, ಸಿದ್ದಲಿಂಗ ರೆಡ್ಡಿ ಇಟ್ಟಗಾ ತಾಲೂಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕಾಶಿರಾಯ ಗೌಡ ಯಲಗೋಡ, ಶಾಂತಪ್ಪ ಕೂಡ್ಲಿಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು, ಕಾರ್ಯಕರ್ತರು ಹಾಗೂ ಇನ್ನಿತರರು ಉಪಸ್ಥಿತರಿದ್ದರು…

ವರದಿ. ಬಸವರಾಜ್ ಹಿರೇಮಠ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
