ಗಣರಾಜ್ಯೋತ್ಸವ ಆಚರಣೆ ವೇಳೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ತೆರವು ಮಾಡಿಸಿದ ಆರೋಪಕ್ಕೆ ಗುರಿಯಾಗಿರುವ ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡಪಾಟೀಲ ಅವರನ್ನು ವಜಾಗೊಳಿಸಬೇಕೆಂದು ದಲಿತರ ಸಂಘಟನೆಯ ಮುಖಂಡರು , ಪ್ರಗತಿಪರರು , ಚಿಂತಕರು ಒಕ್ಕೊರಲಿನಿಂದ ಆಗ್ರಹಿಸಿ , ಸರಕಾರದ ವಿರುದ್ಧ ರಣಕಹಳೆ ಮೊಳಗಿಸಿದರು . ಶನಿವಾರ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ ಕರ್ನಾಟಕ ನೇತೃತ್ವದಲ್ಲಿ ಇಲ್ಲಿನ ಸಿಟಿ ರೈಲ್ವೇ ನಿಲ್ದಾಣ ಮುಂಭಾಗ ಜಮಾಯಿಸಿದ ಸಾವಿರಾರು ಹೋರಾಟಗಾರರು , ವಿಧಾನ ಸೌಧ , ಹೈಕೋರ್ಟ್ ಚಲೋ ಘೋಷಣೆಯೊಂದಿಗೆ ಬೃಹತ್ ಕಾಲ್ನಡಿಗೆ ಜಾಥಾ ನಡೆಸಿದರು . ಬಳಿಕ ಫ್ರೀಡಂಪಾರ್ಕ್ ಮೈದಾನದಲ್ಲಿ ಬೃಹತ್ ಸಮಾವೇಶದಲ್ಲಿ ಜಮಾವಣೆಗೊಂಡ ಹೋರಾಟಗಾರರು , ಸಂವಿಧಾನ ವಿರೋಧಿ ಮಲ್ಲಿಕಾರ್ಜುನ ಗೌಡ ಪಾಟೀಲ್ ಅವರ ವಿರುದ್ಧ ಈ ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು . ಎಲ್ಲ ಕೋರ್ಟ್ ಸಭಾಂಗಣಗಳಲ್ಲಿಯೇ ಅಂಬೇಡ್ಕರ್ ಅವರ ಭಾವಚಿತ್ರ ಕಡ್ಡಾಯಗೊಳಿಸಿ ಆದೇಶ ಹೊರಡಿಸಬೇಕು . ನ್ಯಾಯಾಲಯಗಳಲ್ಲಿ ಮೀಸಲಾತಿ ಕಡ್ಡಾಯಗೊಳಿಸಬೇಕು . ಅದೇ ರೀತಿ , ಹುಮ್ನಾಬಾದ್ ತಹಶೀಲ್ದಾರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸುವಂತೆ ನಿರ್ಣಯಗಳನ್ನು ಒಕ್ಕೊರಲಿನಿಂದ ಅಂಗೀಕರಿಸಿದರು …
ವರದಿ.ಮಹಾಲಿಂಗ ಗಗ್ಗರಿ. ಬೆಳಗಾವಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
