ಕೂಡ್ಲಿಗಿ ಕ್ಷೇತ್ರದ ಅಭಿವೃದ್ಧಿಯ ಹರಿಕಾರ ಈ ಬಾರಿ ಲೋಕೇಶ್ ವಿ ನಾಯಕ್
ಕೂಡ್ಲಿಗಿ: ವಿಧಾನಸಭಾ ಕ್ಷೇತ್ರದಲ್ಲಿ 10: ವರ್ಷಗಳಿಂದ ಕಾಂಗ್ರೆಸ್ ಪಕ್ಷ ಸಂಘಟನೆ ಮಾಡಿ ಮುಂದಿನ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡುವ ಸಾಧ್ಯತೆಯಿದ್ದು ನಾನು ಈ ಕ್ಷೇತ್ರದಲ್ಲಿ ಹಿಂದುಳಿದ ಎಲ್ಲಾ ಕಾರ್ಯಕ್ರಮಗಳನ್ನು ಜಾರಿಗೆ ತಂದು ಕಾರ್ಯಕ್ರಮದ ಯೋಜನೆಗಳನ್ನು ಪೂರ್ತಿ ಗೊಳಿಸಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಿಸಿದ್ದಲ್ಲಿ ತಮ್ಮ ಸೇವೆ ಮಾಡಲು ಅವಕಾಶ ನೀಡಿದರೆ ಸರ್ಕಾರದ ವತಿಯಿಂದ ಬರುವ ಎಲ್ಲಾ ಸೌಕರ್ಯಗಳನ್ನು ಬಡವರಿಗೆ ಮತ್ತು ಹಿಂದುಳಿದವರಿಗೆ ಮನಮುಟ್ಟುವ ಹಾಗೆ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುತ್ತೇನೆಂದು ಈ ಮೂಲಕ ಕ್ಷೇತ್ರದ ಎಲ್ಲಾ ಮತದಾರರ ಬಂಧುಗಳಿಗೆ ತಿಳಿಯಪಡಿಸುತ್ತಾರೆ.
ಕರೋನಾ ಸಂದರ್ಭದಲ್ಲಿ ಕ್ಷೇತ್ರದ ಎಲ್ಲಾ ಹಳ್ಳಿಗಳಿಗೆ ಭೇಟಿ ನೀಡಿ ಕೈಲಾದಷ್ಟು ಸಹಾಯ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತರಾಗಿ ಪಕ್ಷದ ಕೆಲಸ ಮಾಡಿದ್ದಾರೆ. ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಚಿರಪರಿಚಿತರಾಗಿ ಕ್ರೀಡಾಕೂಟಗಳಿಗೆ ಅನೇಕ ಧನ ಸಹಾಯ ಮಾಡಿದ್ದಾರೆ. ಹಾಗೂ ಕ್ಷೇತ್ರದ ಎಲ್ಲಾ ಹಳ್ಳಿಗಳಿಗೆ ಭೇಟಿ ನೀಡಿ 10 ವರ್ಷಗಳಲ್ಲಿ ಹಿಂದುಳಿದಂತಹ ಜನರ ಸಮಸ್ಯೆ ಮತ್ತು ರೈತರ ಸಮಸ್ಯೆ ಮುಖ್ಯವಾಗಿ ನಿರುದ್ಯೋಗಿಗಳ ಸಮಸ್ಯೆ ಖುದ್ದಾಗಿ ಆಲಿಸಿದ್ದಾರೆ ಆದ್ದರಿಂದ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಲ್ಲಿ ಲೋಕೇಶ್. ಎಂದು ಕರೆಯುತ್ತಾರೆ ಮುಂದೆ ಬರುವ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರು ಖಚಿತ ಎಂದು ಕ್ಷೇತ್ರದ ಜನ ಹೇಳುತ್ತಾರೆ.

ವರದಿಗಾರರು : ಸಿ ಅರುಣ್ ಕುಮಾರ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
