ವರದಿ. ಮಂಜುನಾಥ್, ಎಚ್

ಚಿತ್ರದುರ್ಗ: ಮೊಳಕಾಲ್ಮೂರು/ ದೇವಸಮುದ್ರ ಗ್ರಾಮ ಪಂಚಾಯತಿ ಇಂದು ಫೆ,10-02/21ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಡಿ.ಎಚ್ ಕೃಷ್ಣ ಬಹುಮತದಿಂದ ಅಧ್ಯಕ್ಷೆಗೆ ಆಯ್ಕೆ ಆಗಿದ್ದಾರೆ. ಉಪಾಧ್ಯಕ್ಷರಾಗಿ ಶ್ರೀಮತಿ ಸುಧಾಮಣಿ – ಕುಮಾರ್ ಆಯ್ಕೆಆಗಿದ್ದಾರೆ. ಅಧ್ಯಕ್ಷ ಸ್ಥಾನವು ಅನುಸೂಚಿತ ಪಂಗಡ ಆದರೆ ಉಪಾಧ್ಯಕ್ಷ ಸ್ಥಾನವು ಅನುಸೂಚಿತ ಪಂಗಡ ಮಹಿಳೆಗೆ ಮೀಸಲಾಗಿದ್ದುಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆ ಆದ್ಯತೆ ಬಿಜೆಪಿ ಪಕ್ಷದ ಮುಖಂಡರುಗಳು ವಿಜಯೋತ್ಸವ ಆಚರಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷರಾದ ಡಾ” ಪಿ.ಎಂ ಮಂಜುನಾಥ್, ಹಾಗೂ ಪ್ರಧಾನ ಕಾರ್ಯದರ್ಶಿಯಾದ ಪ್ರಭಾಕರ್, ಎಪಿಎಂಸಿ ಶಿವರಾಮರೆಡ್ಡಿ, ಸಚಿವ ಶ್ರೀರಾಮುಲು ಅವರ ಆಪ್ತ ಕಾರ್ಯದರ್ಶಿಯಾದ ಪಾಪೇಶಿ ನಾಯಕ್, ಎಸ್ ಟಿ ಮೋರ್ಚಾ ಅಧ್ಯಕ್ಷರಾದ ಸಿದ್ದಾರ್ಥ್,ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಪಿ ಲಕ್ಷ್ಮಣ್, ಯುವ ಮೋರ್ಚಾ ಬಿ ವಿಜಯ್, ಸೇರಿದಂತೆ ಬಿಜೆಪಿ ಕಾರ್ಯಕರ್ತರು ಗ್ರಾಮ ಪಂಚಾಯಿತಿಯ 21 ಸದಸ್ಯರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು ಏ.ಕೆ ಕುಮಾರಸ್ವಾಮಿ. ಹಾಗೂ ಗ್ರಾ.ಪಂ ಸಿಬ್ಬಂದಿ ವರ್ಗದವರು ಊರಿನ ಗ್ರಾಮಸ್ಥರು ಉಪಸ್ಥಿತರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
