ಕಾಂಗ್ರೆಸ್ ನವರು ಚಳುವಳಿ ಮಾಡುವಷ್ಟರ ಮಟ್ಟಿಗೆ ಬೆಲೆ ಏರಿಕೆಯಾಗಿಲ್ಲ ಸಿ.ಟಿ.ರವಿ ಹೇಳಿಕೆ…!!!

ಕಾಂಗ್ರೆಸ್ ನವರು ಚಳುವಳಿ ಮಾಡುವಷ್ಟರ ಮಟ್ಟಿಗೆ ಬೆಲೆ ಏರಿಕೆಯಾಗಿಲ್ಲ | ಸಿ.ಟಿ.ರವಿ ಹೇಳಿಕೆ

ಚಿಕ್ಕಮಗಳೂರು: ಕಾಂಗ್ರೆಸ್ ನವರು ಚಳುವಳಿ ಮಾಡುವಷ್ಟರ ಮಟ್ಟಿಗೆ ಬೆಲೆ ಏರಿಕೆಯಾಗಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದು, ಕಾಂಗ್ರೆಸ್ ನವರು ಅಧಿಕಾರ ಬಿಟ್ಟು ಹೋಗುವಾಗ ಗ್ಯಾಸ್ ಬೆಲೆಯು 981 ರೂಪಾಯಿ ಇತ್ತು ಎಂದು ಅವರು ಹೇಳಿದ್ದಾರೆ.

ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕೊವಿಡ್ ನಿಂದಾಗಿ ಜಗತ್ತು ಆರ್ಥಿಕ ಏರಿಳಿತವನ್ನು ಎದುರಿಸುತ್ತಿದೆ. ಇದೀಗ ದೇಶದಲ್ಲಿ ಆಗಿರುವ ಬೆಲೆ ಏರಿಕೆಯು ತಾತ್ಕಾಲಿಕವಾಗಿದೆ. ಈ ಹಿಂದೆ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಕಾರಣದಿಂದ ಬೆಲೆ ಏರಿಕೆಯಾಗಿತ್ತು ಎಂದು ಅವರು ಆರೋಪಿಸಿದರು.

20 ತಿಂಗಳುಗಳ ಕಾಲ ಗರೀಬಿ ಕಲ್ಯಾಣ್ ಯೋಜನೆಯಡಿಯಲ್ಲಿ ಧವಸ ಧಾನ್ಯಗಳನ್ನು ಉಚಿತವಾಗಿ ನೀಡುತ್ತಿರುವ ಏಕೈಕ ರಾಷ್ಟ್ರ ಭಾರತ. ನೂರು ಕೋಟಿ ಜನರಿಗೆ ಲಸಿಕೆ ನೀಡುತ್ತಿರುವ ಏಕೈಕ ರಾಷ್ಟ್ರ ಭಾರತ ಎಂದು ಅವರು ಭಾರತದಲ್ಲಿ ದಿನದಿಂದ ದಿನಕ್ಕೆ ಜನರ ಪ್ರಾಣವನ್ನು ಹಿಂಡುತ್ತಿರುವ ಬೆಲೆಯೇರಿಕೆಯನ್ನು ಸಮರ್ಥಿಸಿಕೊಂಡರು…

ವರದಿ.ಪ್ರತಾಪ್, ಸಿ, ಹರಪನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend