ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಸಂತೆಗುಡ್ಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಂಡ್ರಾವಿ ಗ್ರಾಮದಲ್ಲಿ ಇಂದು ಬಿಜೆಪಿಯ ಯುವ ಮುಖಂಡರಾದ ಎನ್ ವೈ ಚೇತನ್ ಅವರ ಸಂಯೋಗದಲ್ಲಿ ಆರೋಗ್ಯ ತಪಾಸಣೆ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಎನ್ ವೈ ಚೇತನ್ ಅವರು ಮಾತನಾಡಿ ಪ್ರತಿಯೊಬ್ಬರ ಜೀವನದಲ್ಲಿ ಆರೋಗ್ಯ ಮುಖ್ಯ ನಾವೆಲ್ಲರೂ ಆರೋಗ್ಯದಿಂದ ಇರಬೇಕು ಎಂದು ಎಂದು ಆರೋಗ್ಯ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ರಾಂಪುರ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯಧಿಕಾರಿ ಮಧುಕುಮಾರ್, ಠಾಣೆಯ ಪಿ.ಎಸ್.ಐ ಗಾದಿಲಿಂಗಪ್ಪ, ಗ್ರಾ.ಪಂ ಅಧ್ಯಕ್ಷರಾದ ಪರಮೇಶ್ವರಪ್ಪ, ಗ್ರಾ.ಪಂ ಅಧ್ಯಕ್ಷರಾದ ಡಿಎಲ್ ಗುರುಲಿಂಗಪ್ಪ, ಯುವ ಮೋರ್ಚಾ ಅಧ್ಯಕ್ಷರಾದ ಹರೀಶ್, ಹಿರಿಯ ಮುಖಂಡ ಜಿಂಗಲ್ ಬಸವರಾಜ್, ನರಸಿಂಹಮೂರ್ತಿ ರೆಡ್ಡಿ, ತಿಪ್ಪೇಸ್ವಾಮಿ, ಹನುಮಂತ, ಸೇರಿದಂತೆ ಹಲವರು ಉಪಸ್ಥಿತರಿದ್ದರು…

ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
