ಚಿತ್ರದುರ್ಗ (ಸೆ.11) ಚಳ್ಳಕೆರೆ/ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಹಿರೇಹಳ್ಳಿ ಗ್ರಾಮದಲ್ಲಿ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ಮೂರ್ತಿಯನ್ನ ಕಿಡಿಗೇಡಿಗಳು ಧ್ವಂಸ ಮಾಡಿದ ಘಟನೆ ನಿನ್ನೆ ರಾತ್ರಿ(ಶುಕ್ರವಾರ) ನಡೆದಿದೆ. ನಿನ್ನೆ ಗ್ರಾಮದ ಯುವಕರು ಗಣೇಶ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಿದ್ದರು. ಗಣಪತಿ ಮೂರ್ತಿಯನ್ನ ಕೆಳಗೆ ಎಸೆದು, ಅಲಂಕಾರಕ್ಕೆ ಬಳಸಿದ್ದ ಹೂ ಚೆಲ್ಲಾಪಿಲ್ಲಿ ಮಾಡಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಚಿತ್ರದುರ್ಗ: ಸ್ಕೂಟಿ ಚಾಲನೆ ವೇಳೆಯೇ ಪತ್ನಿಯನ್ನ ಹತ್ಯೆಗೈದ ಪಾಪಿ ಪತಿ, ಕಾರಣ? ಕಿಡಿಗೇಡಿಗಳ ಈ ಕೃತ್ಯಕ್ಕೆ ಹಿರೇಹಳ್ಳಿ ಗ್ರಾಮಸ್ಥರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
