ವಿಜಯನಗರ ಜಿಲ್ಲಾ
ಹರಪನಹಳ್ಳಿ ತಾಲ್ಲೂಕಿನ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ
ಐಗೋಳ್ ಚಿದಾನಂದ…….
ಹರಪನಹಳ್ಳಿ ತಾಲ್ಲೂಕಿನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷ ಅವಕಾಶ ನೀಡಿದರೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ಹೇಳಿದರು.
ಅವರು ಕಳೆದ 25 ವರ್ಷಗಳಿಂದ ಹೂವಿನ ಹಡಗಲಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಕಟ್ಟಿ ಬೆಳೆಸಿದ್ದೇನೆ. ರಾಜಕೀಯ ಜೊತೆಗೆ ಸಾಮಾಜಿಕ, ಶೈಕ್ಷಣಿಕ ಹಾಗೂ ಸಹಕಾರ ಕ್ಷೇತ್ರದಲ್ಲಿ ನನ್ನನ್ನು ನಾನು ತೊಡಗಿಸಿಕೊಂಡಿದ್ದೇನೆ ಎಂದರು.
ನಾನೂ ಮೂಲತಃ ವಕೀಲನಾಗಿ, ವಕೀಲರ ಸಂಘದ ಅಧ್ಯಕ್ಷನಾಗಿ, ಮೂರು ವರ್ಷಗಳ ಕಾಲ ಬಳ್ಳಾರಿ ವಿವಿ ಸಂಘದ ಸಹ ಕಾರ್ಯದರ್ಶಿಯಾಗಿ, ಮೂರು ವರ್ಷಗಳ ಕಾಲ ಹರಪನಹಳ್ಳಿ ಎಡಿಬಿ ಕಾಲೇಜ್ ಆಡಳಿತ ಮಂಡಳಿ ಅಧ್ಯಕ್ಷರಾಗಿ, ಹಡಗಲಿ ತಾಲೂಕಿನಲ್ಲಿ ಎರಡು ಬಾರಿ ತಾಲ್ಲೂಕು ಪಂಚಾಯಿತಿ ಸದಸ್ಯರಾಗಿ,ಅಧ್ಯಕ್ಷರಾಗಿ, ಬಿಡಿಸಿಸಿ ಬ್ಯಾಂಕ್ ಹಾಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದೇನೆ.
ಹರಪನಹಳ್ಳಿ ನನಗೆ ಹೊಸದೆನು ಅಲ್ಲ ನಾನು ಹರಪನಹಳ್ಳಿ ತಾಲ್ಲೂಕಿನ ಮೂಮ್ಮಗ ತಾಯಿ ತವರು ಮನೆ ಹರಪನಹಳ್ಳಿ ತಾಲ್ಲೂಕಿನ ಚಿಗಟೇರಿ ಗ್ರಾಮ ಹಾಗೂ ನನ್ನ ಶೈಕ್ಷಣಿಕ ಜೀವನ ಹರಪನಹಳ್ಳಿ ಯಿಂದ ಶುರುವಾಗಿದೆ ಎಂದು ಹೇಳಿದರು.
ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಾಗಿದ್ದು, ಯಾರಾದರೂ ಆಕಾಂಕ್ಷಿಗಳಾಗಬಹುದು,ನಾನು ಯಾರ ನಾಯಕತ್ವದಲ್ಲಿ,ಯಾರ ಮಾತು ಕೇಳಿ ಈ ಕ್ಷೇತ್ರಕ್ಕೆ ಆಕಾಂಕ್ಷಿಯಾಗಿ ಬಂದಿಲ್ಲ, ಪಕ್ಷದಲ್ಲಿ ನಿಷ್ಠೆಯಿಂದ ಕೆಲಸ ಮಾಡಿದ್ದೇನೆ. ಆಗಾಗಿ ನನಗೆ ಪಕ್ಷದ ಹೈಕಮಾಂಡ್ ಗುರುತಿಸಿ ನನಗೆ ಅವಕಾಶ ಕಲ್ಪಿಸಿಕೊಟ್ಟರೆ ಕ್ಷೇತ್ರದ ಅಭಿವೃದ್ಧಿಗೆ ದುಡಿಯುತ್ತೇನೆ ಎಂದರು.
ನಾನು ಹರಪನಹಳ್ಳಿ ಟಿಕೇಟ್ ಆಕಾಂಕ್ಷಿಯಾಗಿ ಯಾರು ಬಲದಿಂದಲೂ ಬಂದಿಲ್ಲ
ನಾನು ಕಾಂಗ್ರೆಸ್ ಪಕ್ಷದ ಬಣದಲ್ಲಿದ್ದೇನೆ, ಇಲ್ಲಿ ಯಾವುದೇ ಬಣಗಳಿಲ್ಲ ಈ ಕ್ಷೇತ್ರದಲ್ಲಿ 10 ಜನ ಆಕಾಂಕ್ಷಿಗಳು ಇದ್ದರು ಎಲ್ಲರೂ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ ಯಾರಿಗೆ ಟಿಕೆಟ್ ನೀಡಿದರು ಪಕ್ಷಕ್ಕೆ ಬದ್ಧವಾಗಿ ಕೆಲಸ ಮಾಡುವುದಾಗಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಪುರಸಭೆ ಸದಸ್ಯ ಭರತೇಶ ಜೋಗಿನರ್, ಪಟ್ನಾಮದ ಪರಶುರಾಮ, ರಾಗಿರೊಟ್ಟಿ ಜಾಕೀರ, ಚಪ್ಪರದಮನೆ ಮಹ್ಮದ್, ಜ್ಯೋತಿ ಈಶಪ್ಪ, ದಾದಾಪೀರ್, ಸೇರಿದಂತೆ ಹಲವಾರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು..

ವರದಿ.ಪ್ರತಾಪ್, ಸಿ, ಹರಪನಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
