ದಿನಾಂಕ 16.09.2022 ರಂದು ಬೆಂಗಳೂರು ನಗರದ ವಿಧಾನ ಸೌದ ಹಾಗು ವಿಕಾಸ ಸೌದಗಳಲ್ಲಿ ಕಾರ್ಯ ನಿರ್ವಹಿಸುವ ಸಫಾಯಿ ಕರ್ಮಚಾರಿ 67 ಮಹಿಳೆಯರಿಗೆ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳನ್ನು ಉಚಿತವಾಗಿ ನೀಡಲಾಯಿತು.ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ, ಸಚಿವರುಗಳಾದ ಶ್ರೀ ಗೋವಿಂದ ಕಾರಜೋಳ, ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಶ್ರೀ ಕೋಟೆ ಶಿವಣ್ಣ, ಶಾಸಕರುಗಳಾದ ಶ್ರೀ ಸಿ ಟಿ ರವಿ, ಶ್ರೀ ಪ್ರಾಣೇಶ್, ಶ್ರೀ ಛಲವಾದಿ ನಾರಾಯಣಸ್ವಾಮಿ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಕೆ ಪಿ ವೆಂಕಟೇಶ್, ಈ ಯೋಜನೆ ಕಾರ್ಯರೂಪಕ್ಕೆ ಬರಲು ಕಾರಣೀಬೂತರಾದ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಹೆಚ್ ಹನುಮಂತಪ್ಪ, ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಕೆ ಬಿ ಮಲ್ಲಿಕಾರ್ಜುನ ಹಾಗು ಆಯೋಗದ ಕಾರ್ಯದರ್ಶಿಗಳಾದ ಶ್ರೀಮತಿ ಚಂದ್ರಕಲಾ ಉಪಸ್ಥಿತರಿದ್ದರು..

ವರದಿ.ಮಹಾಲಿಂಗ ಗಗ್ಗರಿ. ಬೆಳಗಾವಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
