ಕೂಡ್ಲಿಗಿ ಪಟ್ಟಣದ 1ನೇ ವಾರ್ಡಿನಲ್ಲಿ ಸಿಸಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ
ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ 1ನೇ ವಾರ್ಡಿನಲ್ಲಿ ಸಂಡೂರು ರಸ್ತೆಯಿಂದ ಚಿದಂಬರೇಶ್ವರ ದೇವಸ್ಥಾನದವರೆಗೂ 20223 ನೇ ಸಾಲಿನ ಕೆಕೆಆರ್ಡಿ ಬಿ ಯೋಜನೆ ಅಡಿಯಲ್ಲಿ ಕಾರ್ಯನಿರ್ಕ ಇಂಜಿನಿಯರ್ ಲೋಕ ಉಪಯೋಗ ಹೊಸಪೇಟೆ ಇವರ ಅಡಿಯಲ್ಲಿ 35 ಲಕ್ಷ ರೂ ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಎನ್.ವೈ. ಗೋಪಾಲಕೃಷ್ಣ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಉಪಾಧ್ಯಕ್ಷ ರೇಣುಕಾ ಎಸ್ ದುರ್ಗೇಶ್, ಸೂರ್ಯ ಪಾಪಣ್ಣ, ಮುಖಂಡರಾದ ಕೆಎಚ್ ವೀರನಗೌಡ, ಕೆ ಎಂ ತಿಪ್ಪೇಸ್ವಾಮಿ ಮಂಡಲ ಅಧ್ಯಕ್ಷ ಚೆನ್ನಪ್ಪ, ಎಚ್ ರೇವಣ್ಣ, ಹುಡೇಂ ಪಾಪನಾಯಕ್, ಎಇಇ ಮಲ್ಲಿಕಾರ್ಜುನ, ಕೊಟ್ರೇಶ್, ಕಾಂಗ್ರೆಸ್ ಮುಖಂಡ ಕಾವಲಿ ಶಿವಪ್ಪ ನಾಯಕ, ಶಾಸಕರ ಆಪ್ತ ಸಹಾಯಕ ಶ್ರೀಕಾಂತ್, ಸೇರಿದಂತೆ ಬಿಜೆಪಿ ಕಾರ್ಯಕರ್ತರು, ಮುಖಂಡರು, ಪಟ್ಟಣ ಪಂಚಾಯಿತಿ ಸದಸ್ಯರು, ಸಾರ್ವಜನಿಕರು ಇದ್ದರು.

ವರದಿಗಾರರು : ಸಿ ಅರುಣ್ ಕುಮಾರ್ ಜುಮ್ಮೊಬನಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
