ರೆಡ್ಕ್ರಾಸ್ ಸ್ವಯಂಸೇವಕರಿಗೆ ಮೆಚ್ಚುಗೆ ಪ್ರಮಾಣ ಪತ್ರ
ಚಿತ್ರದುರ್ಗ :
ಚಿತ್ರದುರ್ಗ ನಗರದಲ್ಲಿ ಇತ್ತೀಚೆಗೆ ನಡೆದ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಮತ್ತು ಶೋಭಾಯಾತ್ರೆಗೆ ಆಯೋಜಿಸಲಾಗಿದ್ದ ಎಮರ್ಜೆನ್ಸಿ ರೆಸ್ಪಾನ್ಸ್ ತಂಡದಲ್ಲಿ ರೆಡ್ಕ್ರಾಸ್ ಸ್ವಯಂ ಸೇವಕರು ಯಶಸ್ವಿಯಾಗಿ ಮಾಡಿರುವ ಸೇವಾ ಕಾರ್ಯ ಗುರುತಿಸಿ, ನಗರದ ಪೊಲೀಸ್ ಕವಾಯತು ಮೈದಾದನದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ಶುಕ್ರವಾರ ರೆಡ್ಕ್ರಾಸ್ನ ಸ್ವಯಂ ಸೇವಕರಿಗೆ ಮೆಚ್ಚುಗೆ ಪ್ರಮಾಣ ಪತ್ರ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಶಿವಕುಮಾರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು, ರೆಡ್ಕ್ರಾಸ್ನ ಸ್ವಯಂ ಸೇವಕರು ಇದ್ದರು…

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
