ವರದಿ. ವಿರೇಶ್ ಎಚ್ಚರಿಕೆ ಪತ್ರಿಕೆ ವರದಿಗಾರ.

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಲೋಕಿಕೆರೆ ಗ್ರಾಮದಲ್ಲಿ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ “ಶ್ರೀ ಎನ್ ವೈ ಗೋಪಾಲಕೃಷ್ಣರವರು” ಇಂದು ‘ಜಿಲ್ಲಾಧಿಕಾರಿಗಳ ನಡೆ-ಹಳ್ಳಿಗಳ ಕಡೆ’ ವಿಶೇಷ ಕಾರ್ಯಕ್ರಮದ ಅಂಗವಾಗಿ ಮತ ಕ್ಷೇತ್ರದ ಲೋಕಿಕೆರೆ ಗ್ರಾಮದಲ್ಲಿ ಆಯೋಜಿಸಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಭಾಗ್ಯಲಕ್ಷ್ಮಿ ಬಾಂಡ್ ಹಾಗೂ ವೃದ್ಧಾಪ್ಯ ವೇತನ ವಿಧವಾ ವೇತನ ಅಂಗವಿಕಲರ ವೇತನ ಕಂದಾಯ ಇಲಾಖೆ ಪಹಣಿ ತಿದ್ದುಪಡಿ ಆದೇಶ ಪ್ರತಿಗಳನ್ನು ವಿತರಿಸಿದರು..
ತಹಶೀಲ್ದಾರ್ ಮಹಾಬಲೇಶ್ವರ್ ತಾ.ಪಂ ಇ.ಓ.ಬಸಣ್ಣ ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಸದಸ್ಯರು ತಾಲ್ಲೂಕು ಗ್ರಾಮ ಪಂಚಾಯಿತಿ ಸದಸ್ಯರು ಗ್ರಾಮಸ್ಥರು ಹಾಗೂ ಸಾರ್ವಜನಿಕರು ಹಾಜರಿದ್ದರು..
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

